Urdu   /   English   /   Nawayathi

ಗ್ರಾಮಕ್ಕೆ ನುಗ್ಗಿದ ಚಿರತೆ ಹಿಡಿದು ಕಟ್ಟಿ ಹಾಕಿದ ಗ್ರಾಮಸ್ಥರು!

share with us

ಮೈಸೂರು: 03 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಗ್ರಾಮಕ್ಕೆ ನುಗ್ಗಿದ ಚಿರತೆಯನ್ನ ಗ್ರಾಮಸ್ಥರು ಹಿಡಿದು ಕಟ್ಟಿ ಹಾಕಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮವಾದ ರಾಮಪಟ್ಟಣ ಗ್ರಾಮಕ್ಕೆ ಚಿರತೆ ನುಗ್ಗಿದೆ. ನಂತರ ಜನರ ಭಯದಿಂದ ಜೋಳದ ಜಮೀನಿನಲ್ಲಿ ಅವಿತು ಕುಳಿತುಕೊಂಡಿದೆ‌. ಇದನ್ನು ನೋಡಿದ ಕೂಲಿ ಕಾರ್ಮಿಕರು, ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಹುಡುಕಾಟದಲ್ಲಿದ್ದ ಗ್ರಾಮಸ್ಥರು ಅದನ್ನು ಹಿಡಿದು ಕಟ್ಟಿ ಹಾಕಿದ್ದಾರೆ. 5 ತಿಂಗಳ ಮರಿಯಾಗಿರುವುದರಿಂದ ಯಾವುದೇ ಅಪಾಯವಾಗಿಲ್ಲ. ಸೆರೆ ಹಿಡಿದ ಚಿರತೆಯನ್ನ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಒಪ್ಪಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا