Urdu   /   English   /   Nawayathi

ಪ್ರಚೋದನಕಾರಿ ಭಾಷಣ ಮಾಡಿದರೆ ಕ್ರಮ : ಓವೈಸಿಗೆ ಪೊಲೀಸರ ವಾರ್ನಿಂಗ್

share with us

ಬೆಂಗಳೂರು: 20 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿಂದು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಂಸದ ಅಸಾಸುದ್ದೀನ್ ಓವೈಸಿ ಆಗಮಿಸುತ್ತಿದ್ದು, ಪ್ರಚೋದನಕಾರಿ ಭಾಷಣ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಹೇಳಿದ್ದಾರೆ. ಈಶಾನ್ಯ ವಿಭಾಗದ ಪೊಲೀಸರು ವಶಪಡಿಸಿಕೊಂಡ ಕಳವು ಮಾಲು ಪ್ರದರ್ಶನ ಮತ್ತು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ನಂತರ ಸುದ್ದಿಗಾರ ಜತೆ ಮಾತನಾಡಿದರು. ಓವೈಸಿ ಅವರಿಗೆ ಮಾತನಾಡಬೇಡಿ ಎಂದು ಹೇಳುವುದಕ್ಕೆ ಆಗುವುದಿಲ್ಲ. ಅವರು ಸಂಸದರು, ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಅದರ ಜತೆಗೆ ವಾಕ್ ಜವಾಬ್ದಾರಿಯೂ ಇರಬೇಕು. ಪ್ರಚೋದನೆ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ. ಸುಪ್ರೀಂಕೋರ್ಟ್ ಸೂಚನೆ ಇದೆ. ಅದರ ಪ್ರಕಾರ ನಡೆದುಕೊಳ್ಳಬೇಕು. ಈ ಸಂಬಂಧ ಈಗಾಗಲೇ ಆಯೋಜಕರಿಗೆ ಸೂಚಿಸಿದ್ದೇವೆ. ಪ್ರತಿಭಟನೆಗೆ ನಾವು ಪೊಲೀಸ್ ಭದ್ರತೆ ಒದಗಿಸುತ್ತೇವೆ ಎಂದು ಅವರು ಹೇಳಿದರು.

ಈ, ಸಂ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا