Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಂಗಳೂರು: 24 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಕಳೆದ ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ದೇಶದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ರವಿ ಪ್ರಕಾಶ್ ಪೂಜಾರಿ ಬಂಧನದ ಬಗ್ಗೆ ಅಧಿಕೃತವಾಗಿ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಮಾಧ್ಯಮಗೋಷ್ಟಿ ನಡೆಸಿದರು. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 97 ಪ್ರಕರಣಗಳಲ್ಲಿ ಬೇಕಾಗಿದ್ದ ರವಿ ಪೂಜಾರಿ 1994 ರಲ್ಲಿ ಮುಂಬೈನಲ್ಲಿನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಅನಂತರ ಜಾಮೀನು ಪಡೆದು ಕೆಲವೇ ದಿನಗಳಲ್ಲಿ ಬೇರೆ ಬೇರೆ ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಬಂಧನ ಭೀತಿಯಿಂದ ಮುಂಬೈ ತೊರೆದಿದ್ದ. ನೇಪಾಳ, ಬ್ಯಾಂಕಾಕ್, ಉಗಾಂಡ ಮೂಲಕ ಸೆನೆಗಲ್ನಲ್ಲಿ ತಲೆಮರೆಸಿಕೊಂಡಿದ್ದ. ಕಳೆದ 26 ವರ್ಷಗಳಿಂದಲೂ ವಿದೇಶದಲ್ಲಿದ್ದರೂ ದೇಶದ ಉದ್ಯಮಿ, ರಾಜಕಾರಣಿ ಹಾಗೂ ಸಿನಿಮಾದವರಿಗೆ ಹಣಕ್ಕಾಗಿ ಜೀವ ಬೆದರಿಕೆವೊಡ್ಡಿದ್ದ.
ಈತನ ಪತ್ತೆಗಾಗಿ ರಾಜ್ಯ ಸರ್ಕಾರ ನನ್ನನ್ನು ನೇಮಿಸಿತ್ತು. ಇದರಂತೆ 2018 ರಿಂದ ನಿರಂತರ ಪ್ರಯತ್ನದ ಸಲುವಾಗಿ 2019ರಲ್ಲಿ ಜ.19ರಂದು ಆತನನ್ನು ಸೆನೆಗಲ್ ಪೊಲೀಸರು ಬಂಧಿಸಿ ಒಂದು ವರ್ಷ ನ್ಯಾಯಾಂಗ ಬಂಧನದಲ್ಲಿರಿಸಿದ್ದರು. ಕಾನೂನು ಪ್ರಕ್ರಿಯೆ ಮುಗಿಸಿಕೊಂಡು ಇದೇ ತಿಂಗಳ ಫೆ.22ರಂದು ಭಾರತೀಯ ಪೊಲೀಸರಿಗೆ ಹಸ್ತಾಂತರಿಸಲಾಯಿತು ಎಂದು ಅಮರ್ಕುಮಾರ್ ಪಾಂಡೆ ಮಾಹಿತಿ ನೀಡಿದ್ದಾರೆ. ಗ್ಯಾಂಗ್ಸ್ಟರ್ ರವಿ ಪೂಜಾರಿ ಮೇಲೆ ಮುಂಬೈ ಸೇರಿದಂತೆ ದೇಶದ ನಾನಾಕಡೆ ಪ್ರಕರಣಗಳಿವೆ. ಸೆನೆಗಲ್ ದೇಶದ ಸುಪ್ರೀಂಕೋರ್ಟ್ ರವಿ ಪೂಜಾರಿಯ ಅರ್ಜಿಯನ್ನು ವಜಾ ಮಾಡಿದೆ. ಗ್ಯಾಂಗ್ಸ್ಟರ್ ಸಲ್ಲಿಸಿದ್ದ ಭಾರತಕ್ಕೆ ಹಸ್ತಾಂತರಿಸಬಾರದು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ ಭಾರತದ ವಶಕ್ಕೆ ನೀಡಿದೆ. ಈತ ಬುಲೇನಾ ಫಾಸೊ ದೇಶದ ಪೌರತ್ವ ಸಹ ಹೊಂದಿದ್ದ. ಕಳೆದ ಮೂರು ವರ್ಷಗಳ ಹಿಂದೆ ಸೆನೆಗಲ್ನಲ್ಲಿ ವಾಸಿಸುತ್ತಿದ್ದ. ಮಹಾರಾಜ ಹೆಸರಿನ ರೆಸ್ಟೋರೆಂಟ್ ನಡೆಸುತ್ತಿದ್ದ. ಇದರಿಂದಲೇ ವಾರ್ಷಿಕ 25 ಲಕ್ಷ ರೂಪಾಯಿ ಹಣ ಸಂಪಾದಿಸುತ್ತಿದ್ದ. ಅಲ್ಲದೆ, ಸಿನಿಮಾ ನಟರು ಉದ್ಯಮಿಗಳು, ವೈದ್ಯರು ಸೇರಿದಂತೆ ನೂರಾರು ಜನರಿಗೆ ಬೆದರಿಕೆ ಹಾಕಿ ಹಫ್ತಾ ವಸೂಲಿ ಮಾಡುವುದೇ ಈತನ ಕಾಯಕವಾಗಿತ್ತು. ಬುರ್ಕಿನಾ ಫಾಸೋ ಪಾಸ್ಪೋರ್ಟ್ ಬಳಸಿ ಅಮೆರಿಕಕ್ಕೆ ಹೋಗಿ ಬಂದಿದ್ದ ಎಂದು ಎಡಿಜಿಪಿ ಎಳೆಎಳೆಯಾಗಿ ಬಿಚ್ಚಿಟ್ಟರು. ಇನ್ನು ಸೆನೆಗಲ್ಗೆ ನಮ್ಮ ರಾಜತಾಂತ್ರಿಕ ಸಂಬಂಧ ಇಲ್ಲ. ಆದರೂ ಅಲ್ಲಿನ ಅಧಿಕಾರಿಗಳು ನಮಗೆ ಸಹಕರಿಸಿದ್ದಾರೆ. ಹೀಗಾಗಿ ರವಿ ಪೂಜಾರಿ ದೇಶಕ್ಕೆ ಕರೆದುಕೊಂಡು ಬರಲು ಸಹಾಯವಾಯಿತು ಎಂದು ಅಲ್ಲಿನ ಪೊಲೀಸರಿಗೆ ಅಮರ್ಕುಮಾರ್ ಪಾಂಡೆ ಧನ್ಯವಾದ ತಿಳಿಸಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |