Urdu   /   English   /   Nawayathi

ದೆಹಲಿ ಹಿಂಸಾಚಾರದಲ್ಲಿ ಪೊಲೀಸ್​ ಪೇದೆ ಸಾವು... ಕೋಟಿ ರೂ. ಪರಿಹಾರ ಘೋಷಿಸಿದ ಕೇಜ್ರಿವಾಲ್​!

share with us

ನವದೆಹಲಿ: 26 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಕಳೆದ ಮೂರು ದಿನಗಳಿಂದ ದೆಹಲಿ ಹೊತ್ತಿ ಉರಿಯುತ್ತಿದೆ. ಈಶಾನ್ಯ ದೆಹಲಿಯ ದಯಾಳಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ನಿಯಂತ್ರಣ ಮಾಡಲು ತೆರಳಿದ್ದ ಪೊಲೀಸ್ ಪೇದೆ ರತನ್​ ಲಾಲ್​(42) ಸಾವನ್ನಪ್ಪಿದ್ದು, ಇದೀಗ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಈ​ ಘೋಷಣೆ ಮಾಡಿದ್ದು, ಕುಟುಂಬದ ಜವಾಬ್ದಾರಿ ಹೊತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ದೆಹಲಿ ಜನತೆ ಈ ರೀತಿ ಹಿಂಸಾಚಾರ ನಡೆಯಲು ಇಷ್ಟಪಡಲ್ಲ. ಆದರೆ, ಕೆಲ ಸಮಾಜ ವಿರೋಧಿ ಹಾಗೂ ರಾಜಕೀಯ ಶಕ್ತಿಗಳು ಇದರ ಹಿಂದಿವೆ ಎಂದು ಹೇಳಿದ್ದಾರೆ.

1ಕೋಟಿ ರೂ ನೀಡುವುದಾಗಿ ನಡ್ಡಾ ಘೋಷಣೆ: ಗಲಭೆ ವೇಳೆ ಮೃತಪಟ್ಟಿರುವ ಹೆಡ್​ ಕಾನ್​ಸ್ಟೇಬಲ್​ ರತನ್​ ಲಾಲ್​ ಕುಟುಂಬದವರಿಗೆ 1 ಕೋಟಿ ರೂ ಪರಿಹಾರ ನೀಡುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಘೋಷಣೆ ಮಾಡಿದ್ದು, ಮನೆಯಲ್ಲಿ ಒಬ್ಬರಿಗೆ ಸರ್ಕಾರಿ ಕೆಲಸದ ಆಶ್ವಾಸನೆ ನೀಡಿದ್ದಾರೆ. ಸೋಮವಾರ ನಡೆಯುತ್ತಿದ್ದ ಗಲಭೆ ವೇಳೆ ಕಲ್ಲೇಟಿನಿಂದ ರತನ್​ ಲಾಲ್​ ಸಾವನ್ನಪ್ಪಿದ್ದರು. ಈ ನಡುವೆ, ಪ್ರಚೋದನಕಾರಿ ಭಾಷಣ ಮಾಡಿ ಗಲಭೆ ಉದ್ಭವವಾಗಲು ಕುಮ್ಮಕ್ಕು ನೀಡುವವರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ದೆಹಲಿ ಹೈಕೋರ್ಟ್​​ ಆದೇಶ ನೀಡಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا