Urdu   /   English   /   Nawayathi

ದೇಶದ್ರೋಹ ಘೋಷಣೆ ಪ್ರಕರಣ: ಹುಬ್ಬಳ್ಳಿ ವಕೀಲರ ನಿರ್ಣಯಕ್ಕೆ ಹೈಕೋರ್ಟ್ ಬೇಸರ

share with us

ಬೆಂಗಳೂರು: 26 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಕಾಶ್ಮೀರಿ ವಿದ್ಯಾರ್ಥಿಗಳು ದೇಶವಿರೋಧಿ ಘೋಷಣೆ ಕೂಗಿದ ಪ್ರಕರಣ ಸಂಬಂಧ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿದ್ದ ನಿರ್ಣಯಕ್ಕೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಆರೋಪಿ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡ ನಿರ್ಣಯದ ಕಾನೂನು ಬದ್ಧತೆ ಪ್ರಶ್ನಿಸಿ ಬಿ.ಟಿ ವೆಂಕಟೇಶ ಸೇರಿದಂತೆ 24 ವಕೀಲರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.‌ ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿ, ಹುಬ್ಬಳ್ಳಿ ವಕೀಲರ ಸಂಘದ ನಿರ್ಣಯ ಕಾನೂನು ಸಮ್ಮತವಾದುದಲ್ಲ. ಹೀಗಿದ್ದೂ ಆರೋಪಿಗಳ ಪರ ವಕಾಲತ್ತು ಹಾಕಲು ಮುಂದಾದ ವಕೀಲರಿಗೆ ಅರ್ಜಿ ಹಾಕದಂತೆ ಕಿರಿಕಿರಿ ಉಂಟುಮಾಡಲಾಗಿದೆ ಎಂದು ದೂರಿದರು. ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಪೀಠ, ಆರೋಪಿಗಳಿಗೂ ತಮ್ಮ ಪರ ವಾದ ಮಂಡಿಸುವ ಹಕ್ಕಿದೆ. ಉಗ್ರ ಎಂದು ನಿರ್ಣಯಿಸಲಾದ ಅಜ್ಮಲ್ ಕಸಬ್​ಗೂ ವಿಚಾರಣೆಗೆ ಅವಕಾಶ ನೀಡಲಾಗಿದೆ. ಹಾಗಿದ್ದಾಗ ವಕೀಲರ ಸಂಘ ಇಂತಹ ನಿರ್ಣಯ ಕೈಗೊಂಡಿರುವುದು ಕಾನೂನು ಬಾಹಿರ ಎಂದೇ ಪರಿಗಣಿಸಬೇಕಾಗುತ್ತದೆ. ನಿನ್ನೆ ಆರೋಪಿಗಳ ಪರ ವಕೀಲರಿಗೆ ವಕಾಲತ್ತು ಹಾಕಲು ಅಡ್ಡಿ ಮಾಡಿದ ಘಟನೆ ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಲಿದೆ. ನ್ಯಾಯಾಂಗದ ಘನತೆ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಜಾಮೀನು ಅರ್ಜಿ ಹಾಕಲೂ ವಕೀಲರನ್ನು ಬಿಟ್ಟಿಲ್ಲ ಎಂದರೆ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಬೇಸರ ವ್ಯಕ್ತಪಡಿಸಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا