Urdu   /   English   /   Nawayathi

ಲಾರಿ ಚಾಲಕನಂತೆ ಬಂದ ಪೋಲೀಸ್ ಅಧಿಕಾರಿ : ಭ್ರಷ್ಟ ಅಧಿಕಾರಿಗಳು ಬಲೆಗೆ..! : ರವಿ ಚನ್ನಣ್ಣನವರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ

share with us

ಬೆಂಗಳೂರು: 05 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಮುಖಕ್ಕೆ ಮಾಸ್ಕ್ ಹಾಕಿಕೊಂಡು ನಿನ್ನೆ ರಾತ್ರಿ ಲಾರಿ ಚಾಲಕನ ವೇಷ ತೊಟ್ಟು ಕರ್ನಾಟಕ ತಮಿಳುನಾಡಿನ ಗಡಿ ಭಾಗವಾದ ಅತ್ತಿಬೆಲೆ ಚೆಕ್ ಪೋಸ್ಟ್ ನಲ್ಲಿ ಭ್ರಷ್ಟ ಆರ್ ಟಿ ಓ ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಹಾಕಿದ್ದಾರೆ. ಭ್ರಷ್ಟ ಅಧಿಕಾರಿಗಳನ್ನು ಬಂಧಿಸಿ ಅವರ ಬಳಿ ಇದ್ದ 12 ಸಾವಿರದ 350 ರೂಪಾಯಿಗಳನ್ನು ವಶ ಪಡಿಸಿಕೊಳ್ಳಲಾಗಿದೆ. ನಿನ್ನೆ ರಾತ್ರಿ ಅತ್ತಿಬೆಲೆ ಚೆಕ್​ಪೋಸ್ಟ್​ನಲ್ಲಿ ತಮಿಳುನಾಡಿನ ಕಡೆಯಿಂದ ಕರ್ನಾಟಕದ ಕಡೆ ಬರುತ್ತಿದ್ದ ವಾಹನಗಳನ್ನ ತಡೆದು ಅಧಿಕಾರಿಗಳು ನಿಲ್ಲಿಸುತ್ತಿದ್ದರು.. ಸಾರಿಗೆ ಅಧಿಕಾರಿಗಳಾದ ಕರಿಯಪ್ಪ ಮತ್ತು ಜಯಣ್ಣ ಅವರ ಮಾರ್ಗದರ್ಶನದಲ್ಲಿ ವಿವೇಕ್ ಎಂಬ ಹೋಮ್ ಗಾರ್ಡ್ ಸಿಬ್ಬಂದಿ ವಾಹನಗಳನ್ನ ನಿಲ್ಲಿಸಿ ಚಾಲಕರಿಂದ ಹಣ ವಸೂಲಿ ಮಾಡುತ್ತಿದ್ದ. ಟೆಂಪ್ರವರಿ ಪರ್ಮಿಟ್ ಕೊಡುವ ಹೆಸರಲ್ಲಿ ಒಂದೊಂದು ವಾಹನದಿಂದ 400-500 ರೂಪಾಯಿ ಹಣ ಪಡೆಯಲಾಗುತ್ತಿತ್ತು. ಈ ವಿಚಾರ ತಿಳಿದ ಬೆಂಗಳೂರು ಗ್ರಾಮಾಂತರ ಎಸ್ ಪಿ ಆದ ರವಿ ಚನ್ನಣ್ಣನವರ್ ಅವರು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಲಾರಿ ಚಾಲಕನ ರೀತಿಯಲ್ಲಿ ಮಾರುವೇಷದಲ್ಲಿ ಎಂಟ್ರಿ ಕೊಟ್ಟು ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಸದ್ಯ ಇದೀಗ ರವಿ ಚನ್ನಣ್ಣನವರ್ ಅವರ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದು ಇಂತಹ ಬಡ ಚಾಲಕರ ಬಳಿ ಹಣ ವಸೂಲಿ‌ ಮಾಡುವ ಭ್ರಷ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕಿದೆ.

ಸ, ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا