Urdu   /   English   /   Nawayathi

ಕೇರಳಾದಿಂದ ಕರ್ನಾಟಕಕ್ಕೆ ಸಮುದ್ರ ಮೂಲಕ ನುಸುಳುವ ಭೀತಿ, ಕಟ್ಟೆಚ್ಚರ

share with us

ಉಡುಪಿ: 07 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್-19 ಹಿನ್ನೆಲೆಯಲ್ಲಿ ತಲಪಾಡಿ ಗಡಿಭಾಗ ಮುಚ್ಚಿರುವುದರಿಂದ ಕೇರಳಾ ರಾಜ್ಯದಿಂದ ಕರ್ನಾಟಕ ರಾಜ್ಯಕ್ಕೆ ಸಮುದ್ರ ತೀರ ಪ್ರದೇಶದಿಂದ ಜನರು ಒಳ ಬರುವ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಅಧೀಕ್ಷಕರಾದ ಚೇತನ್.ಆರ್ ಹಾಗೂ ಪೊಲೀಸ್ ಉಪಾಧೀಕ್ಷಕರು ಮತ್ತು ಅಧಿಕಾರಿಗಳು ಕೇರಳಾ-ಕರ್ನಾಟಕದ ಗಡಿ ಭಾಗದ ಲ್ಯಾಂಡಿಂಗ್ ಪಾಯಿಂಟ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ದಿನದ 24 ಗಂಟೆಯು ಕರಾವಳಿ ಕಾವಲು ಪೊಲೀಸ್ ಘಟಕದ ಇಂಟರ್‌ಸೆಪ್ಟರ್ ಬೋಟ್‌ಗಳಿಂದ ಗಸ್ತು ನಿರ್ವಹಿಸಲು ಹಾಗೂ ಲ್ಯಾಂಡಿಂಗ್ ಪಾಯಿಂಟ್‌ಗಳಲ್ಲಿ ಈ ಹಿಂದೆ ಚಾಲ್ತಿಯಲ್ಲಿದ್ದ ಪಾಯಿಂಟ್ ಕರ್ತವ್ಯದೊಂದಿಗೆ, ದಿನದ 24 ಗಂಟೆಯು ಸಿ.ಎಸ್.ಪಿ ಠಾಣೆಯ ಅಧಿಕಾರಿ/ಸಿಬ್ಬಂದಿಗಳು ಹಾಗೂ ಕೆ.ಎನ್.ಡಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರುತ್ತಾರೆ. ಯಾವುದೇ ರೀತಿಯಲ್ಲಿ ತೀರ ಪ್ರದೇಶದಲ್ಲಿ ಕೇರಳ ರಾಜ್ಯದಿಂದ ಕರ್ನಾಟಕಕ್ಕೆ ಯಾರು ಆಗಮಿಸದಂತೆ ಸೂಕ್ತ ಎಚ್ಚರಿಕೆಯನ್ನು ಹಾಗೂ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಉ, ಟೈ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا