Urdu   /   English   /   Nawayathi

ಲಾಕ್ ಡೌನ್ ಸಂದರ್ಭದಲ್ಲಿ ಕಳ್ಳತನಕ್ಕಿಳಿದ ಖದೀಮ : ಹಾಲು, ಮೊಸರು, ಮಜ್ಜಿಗೆ ಪ್ಯಾಕೆಟ್ ಎಗರಿಸಿದ ಕಳ್ಳ

share with us

ಹೊನ್ನಾವರ: 07 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ತಾಲೂಕಿನ ಅಗ್ರಹಾರದ ಚಿಪ್ಪಿಹಕ್ಕಲ ಕ್ರಾಸ್ ಬಳಿಯ ಗೀತಾ ಕೊಲ್ಡ್ರಿಂಕ್ಸ್ ಅಂಗಡಿಯಲ್ಲಿ ಹಾಲು, ಮೊಸರು, ಮಜ್ಜಿಗೆ ಪ್ಯಾಕೆಟ್ ಗಳನ್ನು ಕಳ್ಳತನ ನಡೆದಿದೆ. ಸುಮಾರು 30 ರಿಂದ 35 ವರ್ಷ ವಯಸ್ಸಿನ ವ್ಯಕ್ತಿ ಬೆಳಗಿನ ಜಾವ ೪ ಗಂಟೆಗೆ ಬಂದು ಅಂಗಡಿ ಎದುರು ಇಳಿಸಿಟ್ಟಿದ್ದ ಹಾಲು, ಮೊಸರು, ಮಜ್ಜಿಗೆ ಪ್ಯಾಕೆಟ್ ಗಳನ್ನು ಕಳ್ಳತನ ನಡೆಸಿರುವುದು ಸಿಸಿ ಕ್ಯಾಮಾರಾದಲ್ಲಿ ಸೆರೆ ಆಗಿದೆ. ಅಂಗಡಿಯ ಮಾಲೀಕ, ಚಂದ್ರಕಾಂತ್ ಭಂಡಾರಿ ಹೇಳುವ ಪ್ರಕಾರ, ಒಂದೆರಡು ಹಾಲಿನ ಪ್ಯಾಕೆಟ್ ಕಳ್ಳತನ ಪ್ರಕರಣಗಳು ಆಗಾಗ ನಡೆಯುತ್ತಿರುತ್ತದೆ. ಆದರೆ ಈ ಬಾರಿ ಅತಿ ಹೆಚ್ಚಿನ ಮೊತ್ತದ ಹಾಲಿನ ಪ್ಯಾಕೆಟ್ ಕದ್ದೊಯ್ದಿದ್ದಾನೆ. ಒಂದು ವಾರದಲ್ಲಿ ಎರಡು ಬಾರಿ ಕಳ್ಳತನವಾಗಿದೆ. ಕಳ್ಳತನ ನಡೆಸಿದ ವ್ಯಕ್ತಿ ಅಪರಿಚಿತನಾಗಿದ್ದು, ಈತನ ಮುಖಚಹರೆಯ ಬಗ್ಗೆ ಸ್ಥಳೀಯರಿಗೂ ಮಾಹಿತಿ ಇಲ್ಲ ಎಂದಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

 ಸ, ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا