Urdu   /   English   /   Nawayathi

ಸೇಡಂ: ಕೊರೊನಾ ಭೀತಿ ನಡುವೆ ಕುಡಿಯುವ ನೀರಿಗೂ ಹಾಹಾಕಾರ!

share with us

ಸೇಡಂ/ಕಲಬುರಗಿ: 12 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ದೇಶಾದ್ಯಂತ ಲಾಕ್​ಡೌನ್​ ಘೋಷಣೆಯಾಗಿದ್ದು, ಸರ್ಕಾರ ಜನರು ಮನೆಯಿಂದ ಹೊರ ಬರದಂತೆ ಆದೇಶ ಹೊರಡಿಸಿದೆ. ಆದ್ರೆ ಇತ್ತ ಹನಿ ನೀರಿಗಾಗಿ ಜನ ಅನಿವಾರ್ಯವಾಗಿ ರಸ್ತೆಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಕುರಕುಂಟಾ ಮತ್ತು ಅಳ್ಳೊಳ್ಳಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿದೆ. ಅಳ್ಳೊಳ್ಳಿಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆಯಾದರೂ ಜನರಿಗೆ ನೀರು ಸಾಲುತ್ತಿಲ್ಲ. ಇನ್ನು ಕುರಕುಂಟಾ ಗ್ರಾಮದಲ್ಲಿ ಪೈಪಲೈನ್ ಒಡೆದು ದಿನಗಳೇ ಕಳೆದರೂ ಸಹ ಅಧಿಕಾರಿಗಳು ದುರಸ್ತಿ ಕಾರ್ಯಕ್ಕೆ ಮುಂದಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಅಲ್ಲದೇ ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಈ ಕುರಿತು ಕೂಡಲೇ ಅಧಿಕಾರಿಗಳು ಗಮನಹರಿಸಿ ಕುಡಿವ ನೀರಿನ ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا