Urdu   /   English   /   Nawayathi

ಚಿಕ್ಕೋಡಿಯಲ್ಲಿ ಕಳ್ಳಭಟ್ಟಿ ಸಾಗಾಟ: ಆರೋಪಿಯ ಬಂಧನ

share with us

ಚಿಕ್ಕೋಡಿ: 12 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಲಾಕ್​ಡೌನ್​ ನಡುವೆಯೂ ಕಳ್ಳಭಟ್ಟಿ ಸಾಗಿಸುತ್ತಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಮುಗಳಖೋಡ ನೀರಲಕೋಡಿ ತೋಟದ ಬಸವರಾಜ ಚೆನ್ನಪ್ಪ ಬಂಬಲವಾಡ (24) ಬಂಧಿತ ಆರೋಪಿ. ಅಬಕಾರಿ ಅಧಿಕಾರಿಗಳು ರಸ್ತೆಗಾವಲು ನಿರ್ವಹಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಆರೋಪಿಯಿಂದ 15 ಲೀಟರ್​ ಕಳ್ಳಭಟ್ಟಿ ಸಾರಾಯಿ, 1 ನಾಲ್ಕು ಚಕ್ರದ ವಾಹನ ಹಾಗೂ 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಅಬಕಾರಿ ಉಪ ನಿರೀಕ್ಷಕ ಹಣಮಂತ ಪಟಾಟ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯಲ್ಲಿ ರಾಯಬಾಗ ವಲಯದ ಉಪನಿರೀಕ್ಷಕ ವಿಜಯ ಮೆಳವಂಕಿ, ಅಬಕಾರಿ ರಕ್ಷಕರಾದ ಬಿ.ಹೆಚ್.ಪೂಜಾರಿ, ಬಿ.ಎಸ್.ಪಾಟೀಲ, ಜಗದೀಶ ಐಗಳಿ, ಮಾಹಾದೇವ ಸಾಲೂಟಗಿ, ಡಿ.ಎಂ.ಮುಜಾವರ, ಸದಾಶಿವ ಚಿಂಚಲಿ ಪಾಲ್ಗೊಂಡಿದ್ದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا