Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ದಕ್ಷಿಣ ಕನ್ನಡ ಪುತ್ತುರು): 14 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಲಾಕ್ಡೌನ್ ಘೋಷಣೆಯಾಗಿದ್ದರಿಂದ ರಾಜ್ಯದ ಹಲವು ಜನರು ನೆರೆಯ ರಾಜ್ಯಗಳಲ್ಲಿ ಸಿಲುಕಿದ್ದಾರೆ. ಇದೀಗ ಪುತ್ತೂರಿನ ಇಬ್ಬರು ಯುವಕರು ಗುಜರಾತ್ನಲ್ಲಿ ಸಿಲುಕಿದ್ದು, ಕಳೆದ 21 ದಿನಗಳಿಂದ ತಮ್ಮ ಕಾರಿನಲ್ಲಿಯೇ ಉಳಿಯುವ ಪರಿಸ್ಥಿತಿ ಬಂದೊದಗಿದೆ. ವೃತ್ತಿಯಲ್ಲಿ ಅಡಕೆ ಸುಫಾರಿ ವ್ಯಾಪಾರಿಗಳಾಗಿ ಕೆಲಸ ನಿರ್ವಹಿಸುತ್ತಿದ್ದ ಪುತ್ತೂರಿನ ಯುವಕರಿಬ್ಬರು ಕಳೆದ 21 ದಿನಗಳಿಂದ ಗುಜರಾತ್ನ ಚೆಕ್ ಪೋಸ್ಟ್ ಬಳಿ ಕಾರೊಂದರಲ್ಲಿ ಅನಾಥ ಬದುಕು ಸಾಗಿಸುತ್ತಾ ಆತಂಕದಲ್ಲಿದ್ದಾರೆ. ದೇಶದಲ್ಲಿ ಲಾಕ್ಡೌನ್ ಜಾರಿಗೊಳ್ಳುವ ಎರಡು ದಿನಗಳ ಮೊದಲು ಗುಜರಾತ್ ರಾಜ್ಯದ ರಾಜ್ಕೋಟಾದಿಂದ ನಿಸ್ಸಾನ್ ಮೈಕ್ರಾ ಕಾರಲ್ಲಿ ಪುತ್ತೂರಿಗೆ ಹೊರಟಿದ್ದ ಈ ಯುವಕರು ಸುಮಾರು 500 ಕಿ.ಮೀ. ದೂರ ಪ್ರಯಾಣ ಮಾಡಿದ್ದರು. ಗುಜರಾತ್ನ ವಲ್ಸಾಡ್ ಜಿಲ್ಲೆಯ ಅಂಬರ್ಗಾವ್ ಭಿಲಾಡ್ ತಾಲೂಕಿನ ಚೆಕ್ ಪೋಸ್ಟ್ ಬಳಿ ಅವರು ಸಿಲುಕಿಕೊಂಡಿದ್ದು, ಅತ್ತ ವಾಪಸ್ ಹೋಗಲಾರದೆ ಇತ್ತ ತಮ್ಮ ಊರಾದ ಪುತ್ತೂರಿಗೂ ಬರಲಾಗದೆ ಪರದಾಡುತ್ತಿದ್ದಾರೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಆಶಿಕ್ ಹುಸೈನ್ ಹಾಗೂ ಕೆಮ್ಮಿಂಜೆ ಗ್ರಾಮದ ನಿವಾಸಿ ಮೊಹಮ್ಮದ್ ತಾಕೀನ್ ಮರೀಲ್ ಎಂಬ ಈ ಯುವಕರು ಇದೀಗ ತಮ್ಮ ದಿನದ ಬಹುಭಾಗವನ್ನು ಕಾರಿನೊಳಗೆಯೇ ಕಳೆಯುತ್ತಿದ್ದಾರೆ. ಈ ನಡುವೆ ಸ್ಥಳೀಯರ ಸಹಾಯದಿಂದ ಊಟೋಪಚಾರ ದೊರೆತಿದ್ದರೂ ಊರಿಗೆ ಬರಲಾಗದೆ ಕಾಲ ಕಳೆಯುವಂತಾಗಿದೆ. ಸದ್ಯ ಈ ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಗಮನ ಸೆಳೆದಿದ್ದು, ಈ ಇಬ್ಬರೂ ಯುವಕರಿಗೆ ಊಟದ ವ್ಯವಸ್ಥೆಯೂ ಸೇರಿ ಸೂಕ್ತ ವಸತಿ ಒದಗಿಸುವಂತೆ ಗುಜರಾತ್ನ ವೆಲ್ಸಾಡ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |