Urdu   /   English   /   Nawayathi

ಬೆಂಗಳೂರು: 58 ಮಂದಿಯನ್ನ ಕ್ವಾರಂಟೈನ್​​ಗೆ ಕರೆದೊಯ್ಯುವಾಗ ಬ್ಯಾರಿಕೇಡ್​ ತಳ್ಳಿ ಗಲಾಟೆ!

share with us

ಬೆಂಗಳೂರು: 19 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಸೀಲ್​​​ಡೌನ್ ಆಗಿರುವ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಭಾನುವಾರ ಕ್ವಾರಂಟೈನ್​ ಮಾಡಲು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ, ಕೆಲವರು ಆರೋಗ್ಯಾಧಿಕಾರಿಗಳನ್ನು ಅವಾಚ್ಯ ಶಬ್ದಗಳಿಂದ ಬೈದು, ಬ್ಯಾರಿಕೇಡ್ ತಳ್ಳಿ ಗದ್ದಲ ಸೃಷ್ಟಿಸಿದ್ದಾರೆ ಎನ್ನಲಾಗಿದೆ. ಪಾದರಾಯನಪುರದಲ್ಲಿ ಇಲ್ಲಿಯವರೆಗೆ ಒಟ್ಟು‌18 ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ವಲಯದ ಆರೋಗ್ಯಾಧಿಕಾರಿ ಬಾಲಸುಂದರ್, ಒಟ್ಟು 58 ಜನರು ಕೊರೊನಾ ಸೋಂಕಿತರ ದ್ವಿತೀಯ ಸಂಪರ್ಕದಲ್ಲಿದ್ದರು. ಇವರಲ್ಲಿ 17 ಜನ ಸಹಕಾರ ನೀಡಿ ಕ್ವಾರಂಟೈನ್ ಆಗಿದ್ದಾರೆ. ಉಳಿದವರು ನಮಗೆ ಸಹಕಾರ ನೀಡಿಲ್ಲ. ಶಾಸಕರು, ಪಾಲಿಕೆ ಸದಸ್ಯರು ಬರಬೇಕು. ನಮಗೆ ಕೊರೊನಾದ ಯಾವುದೇ ಲಕ್ಷಣ ಇಲ್ಲ ಎಂದು ಹೇಳಿದ್ದಾರೆ. ಇವರ ಮನವೊಲಿಸಲು ಸಾಧ್ಯವಾಗದ ಕಾರಣ ನಾಳೆ ಬೆಳಗ್ಗೆ ಕ್ವಾರಂಟೈನ್ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا