Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಉಡುಪಿ: 27 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ಮುಂಬೈಯಿಂದ ಮಂಡ್ಯಕ್ಕೆ ಖರ್ಜೂರ ಲಾರಿಯಲ್ಲಿ ತೆರಳಿದ್ದ ಕೋವಿಡ್ 19 ಸೋಂಕಿತ ವ್ಯಕ್ತಿ ತ್ರಾಸಿಯ ಪೆಟ್ರೋಲ್ ಬಂಕ್ನಲ್ಲಿ ಸಂಪರ್ಕಕ್ಕೆ ಬಂದಿರುವುದು ಖಚಿತವಾಗುತ್ತಿದ್ದಂತೆ ಈ ಪೆಟ್ರೋಲ್ ಬಂಕ್ನ್ನು ಸೀಲ್ ಡೌನ್ ಮಾಡಲು ಜಿಲ್ಲಾಧಿಕಾರಿ ಜಿ. ಜಗದೀಶ್ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ಮುಂಬೈಯಿಂದ ಎ. 22 ರಂದು ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಬಂದಿದ್ದ ಸೋಂಕಿತನಿಂದ ಎ. 24 ರಂದು ಇವರ ಗಂಟಲುದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ 19 ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಮಂಡ್ಯ ಜಿಲ್ಲಾಡಳಿತ ಮಾಹಿತಿ ನೀಡಿದೆ. ಎ. 20 ರಂದು ಮುಂಬೈಯಿಂದ ಲಾರಿಯಲ್ಲಿ ಹೊರಟ ಈತ ಮರವಂತೆಯ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಪೆಟ್ರೋಲ್ ಬಂಕ್ ಬಳಿ ಸ್ನಾನ ಮಾಡಿದ್ದ. ನಂತರ ಅಲ್ಲೇ ಪಕ್ಕದ ಹೊಟೇಲ್ ನಲ್ಲಿ ಊಟವನ್ನೂ ಮಾಡಿದ್ದ ಎಂದು ತಿಳಿದುಬಂದಿದೆ. ಪೆಟ್ರೋಲ್ ಬಂಕ್ ಮತ್ತು ಊಟದ ವೇಳೆ ಎಷ್ಟು ಜನ ಸೆಕಂಡರಿ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರನ್ನು ಕ್ವಾರಂಟೈನ್ನಲ್ಲಿರಿಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ೨೮ ದಿನಗಳಿಂದ ಯಾವುದೇ ಕೋವಿಡ್ 19 ಪಾಸಿಟಿವ್ ಪ್ರಕರಣ ಇಲ್ಲದ ಉಡುಪಿ ಜಿಲ್ಲೆಯ ಸಾಧನೆಗೆ ಸೋಂಕಿತನ ಮರವಂತೆ ಸಂಪರ್ಕ ಜಿಲ್ಲಾಡಳಿತಕ್ಕೆ ತಲೆನೋವು ತರುವಂತಾಗಿದೆ. ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಸೀಲ್ ಡೌನ್ ಮಾಡಿದ್ದರೂ ಅವಶ್ಯ ಸಾಮಗ್ರಿಗಳ ಸಾಗಣೆ ವಾಹನಗಳಿಗೆ ಅವಕಾಶಕೊಟ್ಟಿರುವುದನ್ನು ದುರುಪಯೋಗಪಡಿಸಿಕೊಂಡು ಇಂತಹ ವ್ಯಕ್ತಿಗಳು ಒಳ ನುಸುಳಿರುವುದು ದೃಢಪಟ್ಟಿದೆ. ಆದ್ದರಿಂದ ಹಸಿರು ವಲಯ ಘೋಷಣೆಯಾದರೂ ಬಹಳ ಕಟ್ಟೆಚ್ಚರ ವಹಿಸಬೇಕಾಗಿದೆ. ಸೋಮವಾರ ಸಂಜೆ ಇಲ್ಲಿನ ಪೆಟ್ರೋಲ್ ಬಂಕ್ ನಲ್ಲಿ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಒಂದು ವೇಳೆ ಆತ ಇಲ್ಲಿಯೇ ಸ್ನಾನ ಮಾಡಿರುವುದು ಖಾತ್ರಿಯಾದರೆ, ಪೆಟ್ರೋಲ್ ಬಂಕ್ನ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಯನ್ನು ಕಂಟೋನ್ಮಂಟ್ ವಲಯವೆಂದು ಘೋಷಿಸಿ, ಸೀಲ್ ಡೌನ್ ಮಾಡಲು ಡಿಸಿಯವರು ಆದೇಶಿಸಿದ್ದಾರೆ. ಜತೆಗೆ ಪೆಟ್ರೋಲ್ ಬಂಕ್ ನ ಎಲ್ಲ ಸಿಬಂದಿಯನ್ನು ಹಾಗೂ ಆ ದಿನ ಶಿರೂರು ಗಡಿಯಲ್ಲಿನ ಚೆಕ್ ಪೋಸ್ಟ. ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲರನ್ನು ಕೂಡ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸುವ ಸಾಧ್ಯತೆಯಿದೆ.
ಉ, ಟೈ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |