Urdu   /   English   /   Nawayathi

ಕಲಬುರ್ಗಿ ಎಪಿಎಂಸಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ.. 1200 ಕ್ವಿಂಟಲ್ ಅಕ್ರಮ​ ಅಕ್ಕಿ ದಾಸ್ತಾನು ಸೀಜ್!!

share with us

ಕಲಬುರಗಿ: 10 ಮೇ 2020 (ಫಿಕ್ರೋಖಬರ್ ಸುದ್ದಿ) ಬಡವರಿಗೆ ಸೇರಬೇಕಾದ ಪಡಿತರ ಧಾನ್ಯ ಕಾಳಸಂತೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರುವುದು ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ ಬಳಿಕ ಬೆಳಕಿಗೆ ಬಂದಿದೆ. ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೀಡಾಗಿದ್ದ ಬಡ ಕುಟುಂಬಗಳಿಗೆ ನೀಡಬೇಕಾಗಿದ್ದ ಅಕ್ಕಿಯನ್ನು ನೆರೆರಾಜ್ಯಗಳಿಗೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಪಿಎಂ​ಸಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ಇಲಾಖೆ ಅಧಿಕಾರಿಗಳು, 1200 ಕ್ವಿಂಟಲ್ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಘಟನೆಯ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಡವರಿಗೆ ನೀಡಬೇಕಾದ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿರೋದು ಯಾರು ಅನ್ನೋದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا