Urdu   /   English   /   Nawayathi

ಕೊರೋನಾ ಸೋಂಕು ಉಲ್ಬಣಗೊಳ್ಳಲು ಪ್ರಯಾಣದ ಸಡಿಲಿಕೆ ಕಾರಣ: ತಜ್ಞರು

share with us

ನವದೆಹಲಿ: 27 ಮೇ 2020 (ಫಿಕ್ರೋಖಬರ್ ಸುದ್ದಿ) ಮಹಾಮಾರಿ ಕೊರೋನಾದಿಂದ ಹೆಚ್ಚು ಹಾನಿಗೊಳಗಾದ ಅಗ್ರ 10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಸ್ಥಾನ ಪಡೆದಿದ್ದು, ಪ್ರಯಾಣದ ಸಡಿಲಿಕೆ ಮಾಡಿದ್ದೇ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ವಲಸೆ ಕಾರ್ಮಿಕರು ಓಡಾಡುತ್ತಿರುವುದು ಮತ್ತು ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದು ಸೋಂಕು ಹೆಚ್ಚಳವಾಗುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ ಎಂದು ತಜ್ಞರು ಹೇಳಿದ್ದಾರೆ. ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ಅವರ ಪ್ರಕಾರ, ಪ್ರಸ್ತುತ ಪ್ರಕರಣಗಳ ಹೆಚ್ಚಳವು ಮುಖ್ಯವಾಗಿ ಹಾಟ್‌ಸ್ಪಾಟ್ ಪ್ರದೇಶಗಳಿಂದ ವರದಿಯಾಗಿದೆ. ಆದರೆ ಮುಂಬರುವ ಕೆಲವೇ ದಿನಗಳಲ್ಲಿ COVID-19 ಪ್ರಕರಣಗಳ ಸಂಖ್ಯೆಯು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಲಕ್ಷಣರಹಿತ ಅಥವಾ ಪ್ರಿಸ್ಸಿಪ್ಟೋಮ್ಯಾಟಿಕ್ ಹಂತದಲ್ಲಿರುವವರು ಸ್ಕ್ರೀನಿಂಗ್ ಕಾರ್ಯವಿಧಾನಗಳ ಮೂಲಕ ಹಾದು ಹೋಗುತ್ತಾರೆ ಮತ್ತು ಕನಿಷ್ಠ ಅಥವಾ ಕಡಿಮೆ ಪ್ರಕರಣಗಳಿರುವ ಪ್ರದೇಶಗಳನ್ನು ತಲುಪಬಹುದು ಎಂದು ಗುಲೇರಿಯಾ ಹೇಳಿದರು. ರೋಗದ ಹರಡುವಿಕೆಯನ್ನು ನಿಯಂತ್ರಿಸಲು ವಲಸಿಗರು ಮರಳಿದ ಪ್ರದೇಶಗಳಲ್ಲಿ ಹೆಚ್ಚು ತೀವ್ರವಾದ ಕಣ್ಗಾವಲು ಮತ್ತು ಮೇಲ್ವಿಚಾರಣೆಯ ಅವಶ್ಯಕತೆಯಿದೆ ಎಂದು ಗುಲೇರಿಯಾ ಹೇಳಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ತಿರುಗಾಡುವಾಗ ಜನರು ಸಾಮಾಜಿಕ ಅಂತರ ಮತ್ತು ಕೈ ನೈರ್ಮಲ್ಯವನ್ನು ಕಾಪಾಡಿಕೊಳ್ಳದಿದ್ದರೆ, ಕೊರೋನಾ ಸೋಂಕು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ಅವರು ಹೇಳಿದರು.

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا