Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಬೆಳ್ತಂಗಡಿ: 02 ಜೂನ್ 2020 (ಫಿಕ್ರೋಖಬರ್ ಸುದ್ದಿ) ಎಪಿಎಂಸಿ ಯಾರ್ಡ್ನಲ್ಲಿ ಇನ್ನು ಮುಂದೆ ವಾರದ ಸಂತೆ ಖಾಯಂ ಆಗಿ ನಡೆಯಲಿದೆ. ಶಾಸಕ ಹರೀಶ್ ಪೂಂಜಾ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡು ವಾರದ ಸಂತೆಯನ್ನು ಎಪಿಎಂಸಿಗೆ ಶಿಫ್ಟ್ ಮಾಡುವ ಮೂಲಕ ಬೆಳ್ತಂಗಡಿ ಜನತೆಯ ಬಹುವರುಷದ ಕನಸನ್ನು ನನಸು ಗೊಳಿಸಿದ್ದಾರೆ. ಈ ಮೊದಲು ವಾರದ ಸಂತೆಯು ಸಂತೆಕಟ್ಟೆ ಪರಿಸರದಲ್ಲಿ ನಡೆಯುತ್ತಿತ್ತು. ಅಲ್ಲಿ ಜಾಗದ ಕೊರತೆ, ವ್ಯಾಪಾರಿಗಳಿಗೆ, ಜನರಿಗೆ ಹಾಗೂ ವಾಹನ ನಿಲುಗಡೆಗೆ ತೊಂದರೆ ಆಗುತ್ತಿತ್ತು. ಆದ್ದರಿಂದ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವೈಯಕ್ತಿಕ ಅಂತರ ಕಾಪಾಡುವ ಉದ್ದೇಶದಿಂದ ಪ್ರತಿ ಸೋಮವಾರ ನಡೆಯುವ ಬೆಳ್ತಂಗಡಿಯ ವಾರದ ಸಂತೆಯನ್ನು ಶಾಸಕ ಹರೀಶ್ ಪೂಂಜಾ ಅವರ ಸೂಚನೆಯಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಳೆಕೋಟೆಯ ಎಪಿಎಂಸಿ ಯಾರ್ಡ್ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲಾಗಿತ್ತು. ಇದೀಗ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿಯ ವಾರದ ಸಂತೆಯನ್ನು ಖಾಯಂ ಆಗಿ ಎಪಿಎಂಸಿ ಯಾರ್ಡಿನಲ್ಲಿಯೇ ನಡೆಸಲು ತೀರ್ಮಾನಿಸಲಾಯಿತು. ಅದೇ ರೀತಿ ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕಾಗಿರುವುದರಿಂದ ಕೃಷಿಕರು, ವ್ಯಾಪಾರಸ್ಥರು ಹಾಗೂ ಗ್ರಾಹಕರ ನಡುವೆ ಸಾಮಾಜಿಕ ಅಂತರ ಕಾಪಾಡಲು ಅವಕಾಶವಾಗಲಿ ಎಂಬ ಉದ್ದೇಶದಿಂದ ಸಾಕಷ್ಟು ಸ್ಥಳಾವಕಾಶವಿರುವ ಎಪಿಎಂಸಿ ಯಾರ್ಡಿನಲ್ಲಿಯೇ ಸಂತೆ ನಡೆಸಲು ತೀರ್ಮಾನಿಸಲಾಯಿತು. ಈ ಬಗ್ಗೆ ಈಟಿವಿ ಭಾರತ್ನೊಂದಿಗೆ ತಾಲೂಕಿನ ಕೃಷಿಕರಾದ ವಕೀಲ ಸುದರ್ಶನ್ ರಾವ್ ಗಜಂತೋಡಿ ಮಾತನಾಡಿ, ಶಾಸಕರ ಹಾಗೂ ಆಡಳಿತ ಮಂಡಳಿಯ ನಿರ್ಧಾರ ಒಳ್ಳೆಯ ಬೆಳವಣಿಗೆ. ಈ ಕೆಲಸ ಯಾವತ್ತೋ ಆಗಬೇಕಾಗಿತ್ತು. ಹಲವಾರು ರಾಜಕೀಯ ಕಾರಣಗಳಿಂದ ಹಾಗೂ ಭ್ರಷ್ಟ ವ್ಯವಸ್ಥೆಯಿಂದ ಆಗಿರಲಿಲ್ಲ. ಈಗ ಆಗಿರುವುದರಿಂದ ಎಲ್ಲಾ ವ್ಯಾಪಾರಸ್ಥರಿಗೆ, ರೈತರಿಗೆ ಹಾಗೂ ಇತರರಿಗೆ ಅನುಕೂಲವಾಗಲಿದೆ. ಶಾಸಕರ ಈ ಕಾರ್ಯ ಶ್ಲಾಘನೀಯ. ತಾಲೂಕಿನ ಎಲ್ಲಾ ರೈತರ ಹಾಗೂ ಕೃಷಿಕರ ಪರವಾಗಿ ಶಾಸಕರಿಗೆ ಅಭಿನಂದಿಸುವೆ ಎಂದರು. ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಕೇಶವ ಪಿ. ಬೆಳಾಲು, ಉಪಾಧ್ಯಕ್ಷ ಅಬ್ದುಲ್ ಗಫೂರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಎಂಜಿನಿಯರ್ ಮಹಾವೀರ ಆರಿಗ ಮತ್ತಿತರರು ಭಾಗವಹಿಸಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |