Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು
ಧರಮ್ ಶಾಲಾ/ಮನಾಲಿ: 07 ಜೂನ್ 2020 (ಫಿಕ್ರೋಖಬರ್ ಸುದ್ದಿ) ಕೇರಳದಲ್ಲಿ ಗರ್ಭಿಣಿ ಕಾಡಾನೆಗೆ ಅನಾನಸು ಹಣ್ಣಿನೊಳಗೆ ವಿಷಕಾರಿ ಪಟಾಕಿ ಇಟ್ಟು ತಿನ್ನುವಂತೆ ಮಾಡಿ ಹತ್ಯೆ ಮಾಡಿದ ಕ್ರೂರತೆಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿರುವಾಗ ಹಿಮಾಚಲ ಪ್ರದೇಶದಲ್ಲಿಯೂ ಇಂಥಹದ್ದೇ ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಗೋಧಿಹಿಟ್ಟಿನಲ್ಲಿ ಪಟಾಕಿ ಸುತ್ತಿ ಇಟ್ಟಿದ್ದನ್ನು ತುಂಬು ಗರ್ಭಿಣಿ ಹಸು ತಿಂದು ಅದರ ದವಡೆ ಸಂಪೂರ್ಣವಾಗಿ ಸ್ಫೋಟಗೊಂಡು ನಿರಂತರವಾಗಿ ರಕ್ತ ಸುರಿಯುತ್ತಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಹಸುವಿನ ಮಾಲೀಕ ಗುರ್ಡಿಯಲ್ ಸಿಂಗ್ ಈ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಅದು ವ್ಯಾಪಕವಾಗಿ ವೈರಲ್ ಆಗಿ #JusticeforNandini ಹ್ಯಾಶ್ ಟಾಗ್ ಟ್ರೆಂಡಿಯಾಗಿದೆ.ಹಸುವಿಗೆ ಚಿಕಿತ್ಸೆ ನೀಡಿದ ನಂತರ ಅದು ಕರುವಿಗೆ ಜನ್ಮ ನೀಡಿತು.
ನೆರೆ ಮನೆಯ ನಂದ್ ಲಾಲ್ ಆರೋಪಿ ಎಂದು ಗುರುತಿಸಿ ನಿನ್ನೆ ಸಂಜೆ ಬಂಧಿಸಲಾಗಿದೆ.
ಮುಖ್ಯಮಂತ್ರಿ ಹೇಳಿಕೆ: ಈ ಹೀನಕೃತ್ಯ ಜನರಲ್ಲಿ ಸಿಟ್ಟು, ಆಕ್ರೋಶ ತರಿಸಿದೆ. ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಘಟನೆಯನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಬಿಲಾಸ್ಪುರ್ ಎಸ್ಪಿ ದಿವಾಕರ್ ಶರ್ಮ, ಸೆಕ್ಷನ್ 286ರಡಿ ಮತ್ತು ಪ್ರಾಣಿಗಳ ವಿರುದ್ಧ ಹಿಂಸೆ ತಡೆ ಕಾಯ್ದೆ ಸೆಕ್ಷನ್ 11ರಡಿ ಮೇ 26ರಂದು ಕೇಸು ದಾಖಲಿಸಲಾಗಿತ್ತು. ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ ಎಂದರು. ಘಟನೆ ಹಿಂದೆ ಕೆಲ ದುಷ್ಕರ್ಮಿಗಳ ಕೈವಾಡವಿದೆ ಎಂದು ಹಸುವಿನ ಮಾಲೀಕರು ಆರೋಪಿಸಿದ್ದಾರೆ. ಬೆಳೆಗಳಿಗೆ ಹಾನಿಯನ್ನುಂಟುಮಾಡುವ ನೀಲಿ ಎತ್ತುಗಳಂತಹ ಕಾಡು ಪ್ರಾಣಿಗಳ ಹಾವಳಿಯನ್ನು ತಪ್ಪಿಸಲು ಹಿಮಾಚಲ ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಗೋಧಿ ಹಿಟ್ಟಿನಲ್ಲಿ ಪಟಾಕಿ, ಸಿಡಿಮದ್ದುಗಳನ್ನು ಸುತ್ತಿ ಇಡುವುದು ಸಾಮಾನ್ಯವಾಗಿದೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |